Latest

ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಹಾರಾಷ್ಟ್ರ ಏಕೀಕರಣ ಸಮಿತಿ ಬ್ಯಾನ್ ಮಾಡಬೇಕೆಂದು ಒತ್ತಾಯಿಸಿ ಕನ್ನಡ ಒಕ್ಕೂಟ ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಕರೆ ನೀಡಿದೆ.

ಬೆಂಗಳೂರಿನಲ್ಲಿ ನಡೆದ ಒಕ್ಕೂಟದ ಸಭೆಯ ನಂತರ ಕನ್ನಡ ಚಳುವಳಿ ವಾಟಾಳ ಪಕ್ಷದ ನಾಯಕ ವಾಟಾಳ ನಾಗರಾಜ ಈ ವಿಷಯ ತಿಳಿಸಿದ್ದಾರೆ.

Home add -Advt

ಅವಶ್ಯಕ ಸೇವೆಗಳನ್ನು ಹೊರತುಪಡಿಸಿ ಅಂದು ಎಲ್ಲವೂ ಬಂದ್ ಆಗಲಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಪೂರ್ಣ ಬಂದ್ ಆಗಲಿದೆ ಎಂದು ತಿಳಿಸಿದರು.

ಇಡೀ ರಾಜ್ಯ ಒಂದಾಗಬೇಕು. ಎಲ್ಲ ಕಡೆ ಬಂದಾಗಬೇಕು. ಪಕ್ಷಾತೀತವಾಗಿ ಬಂದ್ ನಡೆಸಬೇಕು. ಈವರೆಗಿನ ಬಂದ್ ಅಲ್ಲ ಇದು. ಕನ್ನಡಿಗರ ಹೃದಯದಿಂದ ಮಾಡುವ ಬಂದ್ ಇದು ಎಂದು ಅವರು ತಿಳಿಸಿದರು.

ಸುಮಾರು 30ಕ್ಕೂ ಹೆಚ್ಚು ಸಂಘಟನೆಗಳು ಸಭೆಯಲ್ಲಿ ಭಾಗವಹಿಸಿದ್ದವು.

ರಾಣಿ ಚೆನ್ನಮ್ಮ ವಿವಿ ಕಟ್ಟಡಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೂಮಿಪೂಜೆ

Related Articles

Back to top button