Kannada NewsLatest

ಬೆಳಗಾವಿ; ಬೆಂಕಿ ಅವಘಡ; 5 ಎಕರೆ ಕಬ್ಬು ಬೆಂಕಿಗಾಹುತಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬಿನ ಗದ್ದೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಅಪಾರ ಪ್ರಮಾಣದ ಕಬ್ಬು ಬೆಳೆ ಸುಟ್ಟು ಕರಕಲಾದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿವಾಪುರ ಗ್ರಾಮದಲ್ಲಿ ನಡೆದಿದೆ.

5 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ನೂರಾರು ಎಕರೆಯಲ್ಲಿ ಬೆಳೆದ ಕಬ್ಬು ಬೆಂಕಿಯಿಂದ ಬಚಾವಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Home add -Advt

ಇದೇ ವೇಳೆ ಹಾವೇರಿ ಜಿಲ್ಲೆ ಹಿರೇಕೇರೂರು ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 450 ಕ್ವಿಂಟಲ್ ಗೂ ಅಧಿಕ ಮೆಕ್ಕೆಜೋಳ ಬೆಂಕಿಗಾಹುತಿಯಾಗಿವೆ.
ರಾಜ್ಯದಲ್ಲಿ ಮತ್ತೆ 10 ಒಮಿಕ್ರಾನ್ ಕೇಸ್ ಪತ್ತೆ

Related Articles

Back to top button