
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರಸಗೊಬ್ಬರ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ನೀಲಿಜನ್ ರಸ್ತೆಯಲ್ಲಿರುವ ಸಿದ್ದಗಂಗಾ ಅಗ್ರೋ ಸೇಲ್ಸ್ ಕಾರ್ಪೊರೇಶನ್ ಅಂಗಡಿಯ ನಾಗನಗೌಡ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅಂಗಡಿಯ ಒಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಾಲಭಾದೆಗೆ ಮನನೊಂದು ನಾಗನಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಮಯ ಮತ್ತು ಹಣದ ಸದುಪಯೋಗ ಸರ್ಕಾರದ ನೀತಿ