
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಆರಂಭವಾಗಿದ್ದು, ನಡಿಗೆ ಆರಂಭಿಸಿದ ಕೆಲ ಸಮಯದಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸುಸ್ತಾಗಿ ಅರ್ಧದಾರಿಯಲ್ಲೇ ಕಾರು ಹತ್ತಿ ವಿಶ್ರಾಂತಿ ಪಡೆದಿದ್ದಾರೆ.
ಮೇಕೆದಾಟು ಯೋಜನೆಗಾಗಿ ಸಂಗಮ ಕ್ಷೇತ್ರದಿಂದ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ದೊರೆತಿದ್ದು, ಹೆಗ್ಗನೂರು ಗ್ರಾಮಕ್ಕೆ ಬರುತ್ತಿದ್ದಂತೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡಿದೆ. ತೀವ್ರ ಸುಸ್ತು, ಮೈ, ಕೈ ನೋವಿನಿಂದ ಬಳಲುತ್ತಿದ್ದ ಅವರು ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಕಾರಿನಲ್ಲಿ ಗ್ರಾಮಕ್ಕೆ ತೆರಳಿ ವಿಶ್ರಾಂತಿ ಪಡೆದಿದ್ದಾರೆ.
ಆದರೆ ಸಿದ್ದರಾಮಯ್ಯನವರಿಗೆ ಜ್ವರ ತೀವ್ರಗೊಂಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗಾಗಿ ಇದೀಗ ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಬೂಸ್ಟರ್ ಡೋಸ್ ಪಡೆದುಕೊಂಡಿದ್ದರು. ಬೂಸ್ಟರ್ ಡೋಸ್ ನಿಂದಾಗಿಯೇ ಅವರಲ್ಲಿ ನಿನ್ನೆ ರಾತ್ರಿಯಿಂದ ಜ್ವರ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
ಮೇಕೆದಾಟು ಯೋಜನೆ; ಸಚಿವರೊಂದಿಗೆ ಸಿಎಂ ತುರ್ತು ಸಭೆ