Latest

ಅವರು, ಅವರಪ್ಪ, ಮಗ ಎಲ್ಲಾ ಸೋತಿಲ್ವಾ? ತಿರುಗೇಟು ನೀಡಿದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈ ಬಾರಿ ಸಿದ್ದರಾಮಯ್ಯ ಅವರನ್ನು ಬಾದಾಮಿಯಿಂದಲು ಓಡಿಸಲಿದ್ದಾರೆ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ ಎಂದಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಿಂದ ಜನ ಓಡಿಸಿದ್ದಾರೆ, ಈಸಲ ಬಾದಾಮಿಯಿಂದಲೂ ಓಡಬೇಕಾಗುತ್ತದೆ ಎಂಬ ಕುಮಾರಸ್ವಾಮಿ ಸರಣಿ ಟ್ವೀಟ್ ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಕುಮಾರಸ್ವಾಮಿ ಚುನಾವಣೆಯಲ್ಲಿ ಸೋತಿಲ್ಲವೇ? ಅವರಪ್ಪ ಸೋಲಲಿಲ್ಲವೇ? ಕುಮಾರಸ್ವಾಮಿ ಅಣ್ಣ, ಅವರ ಮಗ ಕೂಡ ಸೋತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪು ಅಂತಿಮ ಎಂದು ಹೇಳಿದರು.

Related Articles

ಗುರುಸ್ವಾಮಿ ಅವರೆದುರು ಸೋತುಸುಣ್ಣವಾದ ಮೇಲೆ ಅನುಗ್ರಹಕ್ಕೆ ಬಂದು ಯಾರ ಮುಂದೆ ಅತ್ತು ರಾಜಕೀಯ ಬಿಟ್ಟು ವಕೀಲಿ ಮಾಡುತ್ತೇನೆ ಎಂದಿರಿ ನೆನೆಪಿದೆಯಾ? ಎಂಬ ಹೆಚ್ ಡಿಕೆ ಪ್ರಶ್ನೆಗೆ ನಾನೇಕೆ ಅಳಲಿ? ರಾಜ್ಯದ ಜನರ ಮುಂದೆ ಅತ್ತುಕೊಂಡು ಓಡಾಡುವವರು ಯಾರು? ಕಣ್ಣೀರು ಹಾಕುವವರು ಯಾರು? ಎಂದು ಎಲ್ಲರಿಗೂ ಗೊತ್ತು. ಗುರುಸ್ವಾಮಿ ಎದುರು ನಾನು ಸೋತಾಗ ಕುಮಾರಸ್ವಾಮಿ ಎಲ್ಲಿದ್ದರು? ನಾನು ಅಧ್ಯಕ್ಷನಾದಾಗ ಇವರು ಎಲ್ಲಿದ್ದರೆಂಬುದೇ ಗೊತ್ತಿರಲಿಲ್ಲ ಎಂದು ಹೇಳಿದ್ದಾರೆ.

ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ವಿನಾಶಕಾಲೇ ವಿಪರೀತ ಸುಳ್ಳು; ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಕಿಡಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button