ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ನಿಗೂಢವಾಗಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವಲ್ಸ್ ಮಾಲೀಕ ಇದೀಗ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ ದಿಢೀರ್ ನಾಪತ್ತೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ 54 ವರ್ಷದ ಪ್ರಕಾಶ್, ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಬಳಿ ಹೊಳೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಪ್ರಕಾಶ್ ನಾಪತ್ತೆಯಾಗಿರುವ ಬಗ್ಗೆ ಕುಟುಂಬದವರು ಸಾಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶೋಧಕಾರ್ಯ ನಡೆಸಿದ್ದ ಪೊಲೀಸರಿಗೆ ಪಟಗುಪ್ಪ ಸೇತುವೆ ಬಳಿ ಪ್ರಕಾಶ್ ಕಾರು ಹಾಗೂ ಮೊಬೈಲ್ ಪತ್ತೆಯಾಗಿತ್ತು. ಅನುಮಾನಗೊಂಡು ಹೊಳೆಯಲ್ಲಿ ಶೋಧ ಕಾರ್ಯ ನಡೆಸಲಾಗಿದ್ದು, ಇದೀಗ ಪಟಗುಪ್ಪ ಹೊಳೆಯಲ್ಲಿ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿದೆ.
ಸುಮಾರು ಟ್ರಾವೆಲ್ಸ್ ಸೇವೆಯನ್ನು ಕಳೆ 20 ವರ್ಷಗಳಿಂದ ನಡೆಸುತ್ತಿದ್ದ ಪ್ರಕಾಶ್ ಇದ್ದಕ್ಕಿದ್ದಂತೆ ಸಾವನ್ನಪ್ಪಿರುವುದು ಆಘಾತಕ್ಕೆ ಕಾರಣವಾಗಿದೆ. ಲಾಕ್ ಡೌನ್ ಬಳಿಕ ಟ್ರಾವಲ್ಸ್ ಸಂಸ್ಥೆ ನಷ್ಟಕ್ಕೀಡಾಗಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದರಾ? ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ನಾದಿನಿ ಮದುವೆಯಾಗಲು ಕಿಡ್ನ್ಯಾಪ್ ಪ್ಲಾನ್ ಮಾಡಿದ ಭಾವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ