Latest

ಶಾಲಾ-ಕಾಲೇಜುಗಳಲ್ಲಿ ಏಕರೂಪದ ಸಮವಸ್ತ್ರ ಜಾರಿ – ರಾಜ್ಯ ಸರಕಾರದ ಹೊಸ ಆದೇಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದಕ್ಕೆ ಬ್ರೇಕ್ ಹಾಕಲು ಯತ್ನಿಸಿರುವ ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಏಕರೂಪದ ಸಮವಸ್ತ್ರ ಜಾರಿ ಮಾಡಿ ಆದೇಶ ಹೊರಡಿಸಿದೆ.

ಪಿಯು ಕಾಲೇಜುಗಳಲ್ಲಿ ಅಲ್ಲಿನ ಕಾಲೇಜು ಅಭಿವೃದ್ಧಿ ಮಂಡಳಿ ನಿಗದಿ ಪಡಿಸಿದ ಸಮವಸ್ತ್ರವೇ ಅಂತಿಮವಾಗಿದೆ. ಒಂದು ವೇಳೆ ಸಮವಸ್ತ್ರ ನಿಗದಿ ಮಾಡದಿದ್ದರೆ ಸಮರ್ಪಕ ಉಡುಪು ಜಾರಿಗೊಳಿಸಬೇಕು ಎಂದು ತಿಳಿಸಿದೆ.

ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿದ ಸಮವಸ್ತ್ರ ಹಾಗೂ ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸುವ ಯೂನಿಫಾರ್ಮ್ ಕಡ್ಡಾಯವಾಗಿದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ಹಿಜಾಬ್ ಹಾಗೂ ಕೇಸರಿ ಶಾಲು ಜಟಾಪಟಿಗೆ ಅಂತ್ಯ ಹಾಡಲು ಪ್ರಯತ್ನಿಸಿದೆ.

ಹಿಜಾಬ್ ವಿವಾದ; ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರೂಲಿಂಗ್
ಮಕ್ಕಳಲ್ಲೇಕೆ ಕೋಮು ಭಾವನೆ ಬಿತ್ತುತ್ತಿದ್ದೀರಿ? ರಾಷ್ಟ್ರೀಯ ಪಕ್ಷಗಳಿಗೆ ಸಾಮರಸ್ಯದ ಕಾಳಜಿ ಇದ್ದರೆ ವಿಚಾರ ಇಲ್ಲಿಗೆ ಬಿಡಲಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button