Kannada NewsLatest

ಬೆಳಗಾವಿ ಉದ್ಯಮಿ ಕಿಡ್ನ್ಯಾಪ್ ಕೇಸ್; ಮತ್ತೆ ಮೂವರು ಆರೋಪಿಗಳ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಉದ್ಯಮಿ ರವಿಕಿರಣ್ ಭಟ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕ್ರಿಪ್ಟೋ ಕರೆನ್ಸಿ ವ್ಯವಹಾರ ನಡೆಸುತ್ತಿದ್ದ ಉದ್ಯಮಿ ರವಿಕಿರಣ್ ಭಟ್ ಕಿಡ್ನ್ಯಾಪ್ ಕೇಸ್ ಸಂಬಂಧ ಮಹಾರಾಷ್ಟ್ರದಲ್ಲಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಬಂಧಿತ ಮೂವರು ಆರೋಪಿಗಳನ್ನು ಸಾಂಗ್ಲಿಯ ಶಹನವಾಜ್ ಚಮನಶೇಖ್, ಅಜ್ಜು ಚಮನಶೇಖ್, ಅಭಿಷೇಕ್ ಶೆಟ್ಟಿ ಎಂದು ತಿಳಿದುಬಂದಿದೆ. ಇನ್ನೋರ್ವ ಪ್ರಮುಖ ಆರೋಪಿ ಯೂನೂಸ್ ಖಾಜಿಗಾಗಿ ಶೋಧಕಾರ್ಯ ಮುಂದುವರೆದಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button