Kannada NewsLatest
ಬೆಳಗಾವಿ: ಯುವತಿಯರನ್ನು ಚುಡಾಯಿಸುತ್ತಿದ್ದ ಯುವಕನಿಗೆ ಧರ್ಮದೇಟು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಯುವತಿಯರನ್ನು ಚುಡಾಯಿಸುತ್ತಿದ್ದ ಯುವಕನೊಬ್ಬನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರದ ಶಿವ ಸ್ಮಾರಕ ಬಳಿ ನಡೆದಿದೆ.
ರಾಜಸ್ಥಾನ ಮೂಲದ 19 ವರ್ಷದ ಯುವಕ, ಟೇಲರಿಂಗ್ ಕ್ಲಾಸ್ ಗೆ ಹೋಗುತ್ತಿದ್ದ ಯುವತಿಯರನ್ನು ಚುಡಾಯಿಸುತ್ತಿದ್ದ. ಈ ಬಗ್ಗೆ ಯುವತಿಯರು ಸ್ಥಳಿಯರ ಗಮನಕ್ಕೆ ತಂದಿದ್ದಾರೆ.
ತಕ್ಷಣ ಯುವಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು, ಬುದ್ಧಿವಾದ ಹೆಳಿ ಬಿಟ್ಟು ಕಳುಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾಲೇಜು ಪ್ರಾಚಾರ್ಯರಿಗೆ ಅರೆಸ್ಟ್ ವಾರೆಂಟ್ ಜಾರಿಮಾಡಿದ ಗೋಕಾಕ್ ಕೋರ್ಟ್




