Latest

ಕಾಶ್ಮೀರ ಕಣಿವೆಯಲ್ಲಿ ಬಸಿದ ನೆತ್ತರು, ಉಗ್ರರಿಂದ ಗ್ರೆನೇಡ್ ದಾಳಿ

ಪ್ರಗತಿ ವಾಹಿನಿ ಸುದ್ದಿ ಶ್ರೀನಗರ: ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಉಗ್ರರ ಗ್ರೆನೇಡ್ ದಾಳಿಗೆ ಓರ್ವ ಪೊಲೀಸ್ ಬಲಿಯಾಗಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶುಕ್ರವಾರ ಸಂಜೆ ಬಿಎಸ್‌ಎಫ್ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಗ್ರೆನೇಡ್ ಎಸೆದಿದ್ದು ಪೊಲೀಸ್ ಜುಬೇರ್ ಅಹಮ್ಮದ್ ಎಂಬ ಪೊಲೀಸ್ ಮೃತಪಟ್ಟಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ವಕ್ತಾರ, ಗ್ರೆನೇಡ್ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದನ್ನು ಖಚಿತಪಡಿಸಿದ್ದಾರೆ. ಬಂಡಿಪೋರಾ ಜಿಲ್ಲೆಯ ನಿಶಾತ್ಗ್ ಪಾರ್ಕ್ ಬಳಿ ಬಿಎಸ್‌ಎಫ್ ಯೋಧರು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಉಗ್ರರು ಗ್ರೆನೇಡ್ ಎಸೆದಿದ್ದಾರೆ. ಅಲ್ಲದೇ ಗುಂಡಿನ ದಾಳಿ ಸಹ ನಡೆಸಿದ್ದಾರೆ. ಗ್ರೆನೇಡ್ ಸ್ಪೋಟದಿಂದ ಓರ್ವ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದು ಗಾಯಗೊಂಡ ನಾಲ್ವರು ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸ್ ವಕ್ತಾರರು ಮಾಹಿತಿ ನೀಡಿದ್ದಾರೆ.

ರೈತನ ಖಾತೆಗೆ ಬಿತ್ತು 15 ಲಕ್ಷ, ಮೋದಿ ಹಾಕಿದ್ದಾರೆಂದು ತಿಳಿದು ಮನೆ ಕಟ್ಟಿಸಿದ ಮುಗ್ಧ !

Home add -Advt

Related Articles

Back to top button