Latest

ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಚಿಕ್ಕೋಡಿಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಎಐಸಿಸಿ ಅಧ್ಯಕ್ಷ ರಾಹುಲ ಗಾಂಧಿ  ವಿಶೇಷ ವಿಮಾನದಲ್ಲಿ ಇಂದು ಸಂಜೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಸಾಧುನವರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಚನ್ನರಾಜ ಹಟ್ಟಿಹೊಳಿ, ಶಿವಕಾಂತ ಸಿದ್ನಾಳ, ಮಾಜಿ ಶಾಸಕ ಫಿರೋಜ್ ಸೇಠ್ ಮೊದಲಾದವರು ವಿಮಾನ ನಿಲ್ದಾಣದಲ್ಲಿ ರಾಹುಲ ಗಾಂಧಿಯವರನ್ನು ಸ್ವಾಗತಿಸಿ, ಚಿಕ್ಕೋಡಿಗೆ ಬೀಳ್ಕೊಟ್ಟರು.

Home add -Advt

Related Articles

Back to top button