Latest

ಉಪತಹಶೀಲ್ದಾರ್ ತಂದೆ-ತಾಯಿ ಆತ್ಮಹತ್ಯೆಗೆ ಶರಣು

ಪ್ರಗತಿವಾಹಿನಿ ಸುದ್ದಿ; ತುಮಕೂರು: ಉಪತಹಶೀಲ್ದಾರ್ ಒಬ್ಬರ ವೃದ್ಧ ತಂದೆ-ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹಾಲೇಳನಹಳ್ಳಿಯಲ್ಲಿ ನಡೆದಿದೆ.

ಮಧುಗಿರಿ ಉಪತಹಶೀಲ್ದಾರ್ ಶಿವರುದ್ರಯ್ಯ ಅವರ ತಂದೆ ಶಿವಣ್ಣ (78), ತಾಯಿ ಸಿದ್ದಲಿಂಗಮ್ಮ (73) ಆತ್ಮಹತ್ಯೆಗೆ ಶರಣಾದವರು. 2 ದಿನಗಳಿಂದ ದಂಪತಿ ಮನೆಯಿಂದ ಹೊರಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಅಕ್ಕಪಕ್ಕದ ಮನೆಯವರು ಕಿಟಕಿ ತೆಗೆದು ನೋಡಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

ಸಾಲದ ಹೊರೆಯಿಂದಾಗಿ ಉಪತಹಶೀಲ್ದಾರ್ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಳೆಯಿಂದ SSLC ಪರೀಕ್ಷೆ; ವಿದ್ಯಾರ್ಥಿಗಳು ಭಯವಿಲ್ಲದೇ ಪರೀಕ್ಷೆ ಬರೆಯಿರಿ; ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button