Latest

ಹೃದಯಾಘಾತ; SSLC ಪರೀಕ್ಷೆಗೆ ನೇಮಕಗೊಂಡಿದ್ದ ಶಿಕ್ಷಕ ಸಾವು

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ನಿನ್ನೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆಗೆ ನೇಮಕಗೊಂಡಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಸಿ.ಎಸ್.ಮುಧೋಳ್ ಮೃತ ಶಿಕ್ಷಕ. ಪರೀಕ್ಷೆ ಮುಗಿಸಿ ಮನೆಗೆ ಬಂದ ಶಿಕ್ಷಕನಿಗೆ ತೀವ್ರ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಸಾವನ್ನಪ್ಪಿದ್ದರು.

ಸಿ.ಎಸ್.ಮುಧೋಳ್ ಬಳ್ಳಾರಿಯ ಎಸ್ ಎಂ ವಿವಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದರು.

ನೀರು ಸರಿಯಾಗಿ ಪೂರೈಕೆ ಮಾಡದಿದ್ದರೆ ಗಿಡಕ್ಕೆ ಕಟ್ಟಿ ಹಾಕ್ತಿನಿ – ಬೆನಕೆ ಎಚ್ಚರಿಕೆ

Home add -Advt

Related Articles

Back to top button