Latest

ಸಿಎಂ ಬೊಮ್ಮಾಯಿಗೆ ಬಯೋಕಾನ್ ಮುಖ್ಯಸ್ಥೆ ಮಾಡಿದ ಮನವಿಯೇನು?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿನ ಸಧ್ಯದ ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಮ್ದಾರ್ ಷಾ, ಕೋಮು ವಿವಾದದ ಬೆಳವಣಿಗೆ ತಡೆಯುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರುತು ಟ್ವೀಟ್ ಮಾಡಿರುವ ಕಿರಣ ಮಜುಮ್ದಾರ್ ಷಾ, ಕರ್ನಾಟಕ ಅಂತರಗತ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತಿದೆ. ಹೀಗಿರುವಾಗ ಕೋಮುವಾದಕ್ಕೆ ಅನುಮತಿ ನೀಡಬಾರದು. ಇದರಿಂದ ಐಟಿಬಿಟಿ ಕ್ಷೇತ್ರದಲ್ಲಿ ಕೋಮುವಾದ ಆರಂಭವಾದರೆ ಕರ್ನಾಟಕದ ಜಾಗತಿಕ ನಾಯಕತ್ವವನ್ನು ನಾಶಪಡಿಸಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಧಾರ್ಮಿಕ ವಿಭಜನೆ, ಧರ್ಮ ಸಂಘರ್ಷಗಳಿಗೆ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ರಾಜ್ಯಲ್ಲಿ ನಡೆಯುತ್ತಿರುವ ಕೋಮುವಾದವನ್ನು ತಡೆಯುವಂತೆ ಸಿಎಂ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.

ಶ್ರೀಶೈಲಂನಲ್ಲಿ ಕನ್ನಡಿಗ ಭಕ್ತರು ಸಾವನ್ನಪ್ಪಿಲ್ಲ, ವದಂತಿಗಳನ್ನು ನಂಬಬೇಡಿ: ಕರ್ನೂಲ್ ಎಸ್‍ಪಿ ಸುಧೀರ್ ಕುಮಾರ್ ರೆಡ್ಡಿ ನೀಡಿರುವ ನಿಖರ ಮಾಹಿತಿ ಇಲ್ಲಿದೆ

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button