Latest
2 ಸಾವಿರಕ್ಕೂ ಹೆಚ್ಚು ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ಮರಳಿದ್ದಾರೆ. ಆರ್ಟಿಕಲ್ 370 ರದ್ದು ಮಾಡಿದ್ದರ ಪ್ರಯೋಜನ ಎಂದ ಸಚಿವ

ಪ್ರಗತಿವಾಹಿನಿ ಸುದ್ದಿ, ನವದೆಹಲಿ –
ಆರ್ಟಿಕಲ್ ೩೭೦ ಅನ್ನು ರದ್ದು ಮಾಡಿದ ಬಳಿಕ ಈವರೆಗೆ ೨೦೧೫ ಜನರು ಕಾಶ್ಮೀರದಿಂದ ಬೇರೆಡೆ ನಿರಾಶ್ರಿತರಾಗಿ ವಲಸೆ ಹೋಗಿದ್ದವರು ಕಾಶ್ಮೀರಕ್ಕೆ ಮರಳಲು ಸಾಧ್ಯವಾಗಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ.
ಬುಧವಾರ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ಅಭಿವೃದ್ಧಿ ಯೋಜನೆಯಡಿ ೨೦೨೦-೨೧ರಲ್ಲಿ ೮೪೧ ಹಾಗೂ ೨೦೨೧-೨೨ನೇ ಸಾಲಿನಲ್ಲಿ ೧೨೬೪ ಜನ ಕಾಶ್ಮೀರಕ್ಕೆ ವಾಪಸಾಗಿದ್ದು ಉದ್ಯೋಗ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ನಯವಂಚಕರ ಬಂಡವಾಳ ಬಿಚ್ಚಿಡುತ್ತೇನೆ: ಗುಡುಗಿದ ನಿವೃತ್ತ ಐಪಿಎಸ್ ಭಾಸ್ಕರ್ ರಾವ್