Latest
ಎಸಿ ಸ್ಫೋಟ; ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಎಸಿ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಎ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಮಕ್ಕಳು ಪತಿ-ಪತ್ನಿ ಬಲಿಯಾಗಿದ್ದು, ಓರ್ವರು ಬಚಾವಾಗಿದ್ದಾರೆ. ವೆಂಕಟ್ ಪ್ರಶಾಂತ್(42), ಡಿ.ಚಂದ್ರಕಲಾ (38) ಹಾಗೂ ಮಕ್ಕಳಾದ ಅರ್ದ್ವಿಕ್ (16), ಪ್ರೇರಣಾ (8) ಸಜೀವ ದಹನಗೊಂಡಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎಸಿ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಮನೆಯ ತುಂಬೆಲ್ಲ ದಟ್ಟ ಹೊಗೆ ಆವರಿಸಿದೆ. ಘಟನೆಯಲ್ಲಿ ರಾಜಶ್ರೀ ಎಂಬ ಮಹಿಳೆ ಮನೆಯಿಂದ ಹೊರಗೊಡಿ ಬಂದು ಜೀವ ಉಳಿಸಿಕೊಂಡಿದ್ದಾರೆ.
2 ಕೋಟಿ ಕಳ್ಳತನ ಪ್ರಕರಣಕ್ಕೆ ಟ್ವಿಸ್ಟ್




