
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 545 ಪಿಎಸ್ ಐ ಹುದ್ದೆ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಇದೀಗ ಪ್ರಭಾವಿ ಮತ್ರಿಯೊಬ್ಬರ ಹೆಸರು ಕೇಳಿಬರುತ್ತಿದ್ದು, ಬರೋಬ್ಬರಿ 80 ಲಕ್ಷ ರೂಪಾಯಿ ಡೀಲ್ ನಡೆದಿದೆ ಎಂದು ಹೇಳಲಾಗುತ್ತಿದೆ.
ಓಎಂಆರ್ ಶೀಟ್ ಮಿಸ್ ಮ್ಯಾಚ್ ಆಗಿದ್ದಕ್ಕೆ ಸಿಐಡಿ 10 ಜನರಿಗೆ ನೋಟೀಸ್ ಜಾರಿ ಮಾಡಿತ್ತು. ಪಿಎಸ್ ಐ ಪರೀಕ್ಷೆಯಲ್ಲಿ 4ನೇ ರ್ಯಾಂಕ್ ಬಂದಿದ್ದ ದರ್ಶನ್ ಗೌಡಗೆ ನೋಟೀಸ್ ನೀಡಲಾಗಿತ್ತು. ನೋಟೀಸ್ ಹಿನ್ನೆಲೆಯಲ್ಲಿ ದರ್ಶನ್ ಗೌಡ ವಿಚಾರಣೆಗೆ ಹಾಜರಾಗಿದ್ದ ಈ ವೇಳೆ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾನೆ.
ಪಿಎಸ್ ಐ ನೇಮಕಾತಿಗಾಗಿ 80 ಲಕ್ಷ ರೂಪಾಯಿ ಹಣವನ್ನು ಮಂತ್ರಿಯೊಬ್ಬರ ತಮ್ಮನಿಗೆ ಕೊಟ್ಟಿದ್ದಾಗಿ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಮಂತ್ರಿ ತಮ್ಮನನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದಾರೆ. ಆದರೆ ಯಾವಕಾರಣಕ್ಕೂ ತಮ್ಮನನ್ನು ವಿಚಾರಣೆ ನಡೆಸದಂತೆ, ಬಿಟ್ಟು ಕಳಿಹಿಸುವಂತೆ ಮಂತ್ರಿಯೊಬ್ಬರು ಕರೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇದೇ ಕಾರಣಕ್ಕೆ ರಾತ್ರೋ ರಾತ್ರಿ ಸಿಐಡಿ ಅಧಿಕಾರಿಗಳು ಮಂತ್ರಿ ತಮ್ಮನನ್ನು ಬಿಟ್ಟು ಕಳುಹಿಸಿದ್ದಾರೆ ಎನ್ನಲಾಗುತ್ತಿದೆ.
ಇದೀಗ ಪ್ರಕರಣ ಇನ್ನಷ್ಟು ಕುತೂಹಲ ಮೂಡಿಸಿದ್ದು, ಪಕ್ಷಾತೀತ ಅಕ್ರಮ ನಡೆದಿರುವುದು ಬಹಿರಂಗವಾಗಿದೆ.
ಪಿಎಸ್ ಐ ಅಕ್ರಮ ನೇಮಕಾತಿ; CIDಗೆ ಶರಣಾದ ಮತ್ತೋರ್ವ ಆರೋಪಿ