Kannada NewsKarnataka News
ಶ್ರೀರಾಮ ಮಂದಿರದ ಕಟ್ಟಡ ಕಾಮಗಾರಿ ಕಾಲಂ ಪೂಜೆ ನೆರವೇರಿಸಿದ ಲಕ್ಷ್ಮಿ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ಶ್ರೀರಾಮ್ ಕಾಲೋನಿ ಲಕ್ಷ್ಮೀ ನಗರದಲ್ಲಿ ನೂತನ ಶ್ರೀರಾಮ ಮಂದಿರದ ಕಟ್ಟಡ ಕಾಮಗಾರಿಗಳ ಕಾಲಂ ಪೂಜೆಯನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಂಗಳವಾರ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ಮನೋಹರ ಬೆಳಗಾಂವ್ಕರ ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.