Latest

ಅಂತರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್; ಚಿನ್ನದ ಪದಕ ಗೆದ್ದ ಕರ್ನಾಟಕದ ಕುವರ

ಪ್ರಗತಿವಾಹಿನಿ ಸುದ್ದಿ; ಬೀದರ್: ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ಏರ್ಪಡಿಸಲಾಗಿದ್ದ 2022-23 ನೇ ಸಾಲಿನ ಅಂತರರಾಷ್ಟ್ರೀಯ ಕುಸ್ತಿ ಚಾಂಪಿಯನ್ಶಿಪ್ ನಲ್ಲಿ ರಾಜ್ಯದ ಕುಸ್ತಿಪಟು ಉಮೇಶ ನಾಯಕ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.

ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೋಹಿನೂರ ಗ್ರಾಮದ ಬಡ ಕುಟುಂಬದಲ್ಲಿ ಜನಿಸಿದ ಉಮೇಶ್ ಸತತ ಪರಿಶ್ರಮದಿಂದ ಕುಸ್ತಿಯಲ್ಲಿ ಉತ್ತಮ ಸಾಧನೆಯನ್ನು ಮಾಡಿ ರಾಜ್ಯ, ರಾಷ್ಟ್ರಮಟ್ಟದ ಹತ್ತಾರು ಬಹುಮಾನವನ್ನು ಪಡೆದಿದ್ದರು. ಪ್ರಸ್ತುತ ಮೇ 28 ರಂದು ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ನಡೆದ ಅಂತರರಾಷ್ಟ್ರೀಯ ಕುಸ್ತಿ ಚಾಂಪಿಯನ್ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದಿದ್ದು, ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ.
ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ನಟ ಜಗ್ಗೇಶ್, ನಿರ್ಮಲಾ ಸೀತಾರಮನ್ ಗೆ ಟಿಕೆಟ್

Related Articles

Back to top button