Latest

ದರ್ಶನ್ ಗೌಡನನ್ನು ಬಂಧಿಸಿದ CID

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಬೆಳಕಿಗೆ ಬಂದ ಆರಂಭದಲ್ಲಿ ದರ್ಶನ್ ಗೌಡ ಪೊಲೀಸರ ವಿಚಾರಣೆ ವೇಳೆ ಸಚಿವ ಅಶ್ವತ್ಥನಾರಾಯಣ ಹೆಸರು ಬಾಯ್ಬಿಟ್ಟಿದ್ದ. ಮಾಗಡಿ ಮೂಲದ ದರ್ಶನ್ ಗೌಡನನ್ನು ಸಿಐಡಿ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸರ್ಕಾರವೇ ಆತನನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಇದೀಗ ನಿನ್ನೆ ವಿಚಾರಣೆಗಾಗಿ ಸಿಐಡಿ ಪೊಲೀಸರು ದರ್ಶನ್ ಗೌಡನನ್ನು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ಬಳಿಕ ಇಂದು ಬಂಧಿಸಿದ್ದಾರೆ.

Related Articles

ಪಿಎಸ್ ಐ ಪರೀಕ್ಷೆಯಲ್ಲಿ ದರ್ಶನ್ ಗೌಡ ಓಎಂಆರ್ ಶೀಟ್ ಖಾಲಿ ಬಿಟ್ಟಿದ್ದ. ಪರೀಕ್ಷೆ ಬಳಿಕ ಅದನ್ನು ತುಂಬಲಾಗಿರುವುದು ಎಫ್ ಎಸ್ ಎಲ್ ವರದಿಯಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇದೀಗ ದರ್ಶನ್ ಗೌಡನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಪಿಎಸ್ ಐ ಅಕ್ರಮ; ಕಾನ್ಸ್ ಟೇಬಲ್ ಸೇರಿ ಮೂವರ ವಿರುದ್ಧ FIR

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button