Latest

ನೀರು ಬಿಡದ ಮಹಾರಾಷ್ಟ್ರ: ಡಿಕೆಶಿ ಅಸಮಧಾನ, ಹಿಡಕಲ್ ನೀರು ಬಿಡುಗಡೆ ಆದೇಶ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಮಹಾರಾಷ್ಟ್ರ ಸರಕಾರದೊಂದಿಗೆ ಸಾಕಷ್ಟು ಮಾತುಕತೆ ನಡೆಸಿದರೂ ಏನೂ ಪ್ರಯೋಜನವಾಗುತ್ತಿಲ್ಲ ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ ಖೇದ ವ್ಯಕ್ತಪಡಿಸಿದ್ದಾರೆ. 

 ಕುಡಿಯಲು ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸುವಂತೆ  ಮಹಾರಾಷ್ಟ್ರ ಸರಕಾರಕ್ಕೆ ಹಲವು ಬಾರಿ ಕೋರಿದ್ದೇವೆ. ಆದರೆ ಮಹಾರಾಷ್ಟ್ರ ಸರಕಾರ ನೀರಿಗೆ ನೀರು ಎನ್ನುತ್ತಿದೆ. ಜೊತೆಗೆ ಇನ್ನೂವರೆಗೂ ನೀರು ಬಿಡುವ ಮನಸ್ಸು ಮಾಡುತ್ತಿಲ್ಲ. ಅಲ್ಲಿನ ಸಿಎಂ ಮಾತು ಕೊಟ್ಟಿದ್ದರು, ಒಪ್ಪಂದವೂ ಆಗಿತ್ತು. ಆದರೆ ಫಲಿತಾಂಶ ಶೂನ್ಯವಾಗಿದೆ. ನಮ್ಮ ಅಥಣಿ, ಕಾಗವಾಡ ಭಾಗದ ಜನರ ಕುಡಿಯುವ ನೀರಿಗಾಗಿ ಹಿಡಕಲ್ ಡ್ಯಾಂನಿಂದ 1 ಟಿಎಂಸಿ ನೀರು ಬಿಡಲು ನಮ್ಮ ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದು ನುಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button