ಉತ್ತರ ಕನ್ನಡ ಜಿಲ್ಲಾದ್ಯಂತ ಜು. 19ರ ವರೆಗೆ ಭಾರೀ ಮಳೆ: ತುರ್ತು ಸೇವೆಗೆ ಇಲ್ಲಿ ಸಂಪರ್ಕಿಸಿ

ಪ್ರಗತಿವಾಹಿನಿ ಸುದ್ದಿ, ಕಾರವಾರ  : ಜಿಲ್ಲಾದ್ಯಂತ ಜು. ೧೯ ರವರೆಗೆ ಭಾರೀ ಮಳೆ ಬೀಳುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ -ಗಾಳಿ ಬೀಸುವ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು.

ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆ ಟೋಲ್ ಫ್ರೀ ಸಂಖ್ಯೆ ೧೦೭೭, ಲ್ಯಾಂಡ್ ಲೈನ್ ಸಂಖ್ಯೆ ೦೮೩೮೨-೨೨೯೮೫೭ ಮತ್ತು ವಾಟ್ಸಾಪ್ ಸಂಖ್ಯೆ ೯೪೮೩೫೧೧೦೧೫ ಗೆ ಸಂಪರ್ಕಿಸಬೇಕು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಿನಿಮೀಯ ಮಾದರಿ ಕೊಲೆ ರಹಸ್ಯ ಬಯಲು: ಮಹಿಳೆ ಸಹಿತ ನಾಲ್ವರ ಬಂಧನ

Home add -Advt

 

Related Articles

Back to top button