Kannada NewsKarnataka NewsLatest
ರಾಮದುರ್ಗದಲ್ಲಿ ಇಬ್ಬರು ಮಕ್ಕಳೊಂದಿಗೆ ತಂದೆ-ತಾಯಿ ಆತ್ಮಹತ್ಯೆ

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ
ಪ್ರಗತಿವಾಹಿನಿ ಸುದ್ದಿ, ರಾಮದುರ್ಗ – ಒಂದೇ ಕುಟುಂಬ ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮದುರ್ಗ ಪಟ್ಟಣದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಪ್ರವೀಣ ರಮೇಶ ಶೆಟ್ಟರ್ (37), ಪತ್ನಿ ರಾಜೇಶ್ವರಿ (27), ಮಕ್ಕಳಾದ ಅಮೃತಾ (8), ಅದ್ವಿಕ್ (6) ಮೃತರು.
ಎಲ್ಲರೂ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಸ್ಥಳಕ್ಕೆ ಶಾಸಕ ಮಹಾದೇವಪ್ಪ ಯಾದವಾಡ, ಸಿ.ಪಿ.ಐ ಶಶಿಕಾಂತ ವರ್ಮಾ ಭೇಟಿ ನೀಡಿ ಪರಿಶೀಲಿಸಿದರು.
ತನಿಖೆ ನಡೆಯುತ್ತಿದೆ.




