ಗಣರಾಜ್ಯೋತ್ಸವದ ದಿನ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ಪೊಲೀಸ್ ಅಧಿಕಾರಿ

ಪ್ರಗತಿ ವಾಹಿನಿ ಸುದ್ದಿ ಕಾರವಾರ – ಗಣರಾಜ್ಯೋತ್ಸವದ ದಿನ ಕರ್ತವ್ಯದಲ್ಲಿದ್ದಾಗಲೇ ಕಾರವಾರದ ಸಂಚಾರಿ ಪೊಲೀಸ್ ಠಾಣೆಯ ಎಎಸ್ ಐ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಅಬ್ದುಲ್ ಖಾದರ್ ಮಹ್ಮದ್ ಶೇಖ್ ಮೃತಪಟ್ಟವರು.

1964 ರಂದು ಕಾರವಾರದಲ್ಲಿ ಜನಿಸಿದ ಅವರು, 1992 ರಲ್ಲಿ ಪೊಲೀಸ್ ಕಾನಸ್ಟೇಬಲ್ ಆಗಿ ನೇಮಕಗೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ , ದಾಂಡೇಲಿ ಗ್ರಾಮೀಣ, ದಾಂಡೇಲಿ ನಗರ, ಜೊಯಿಡಾ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

2019 ರಲ್ಲಿ ಎಎಸ್ಐ ಆಗಿ ಪದೊನ್ನತಿ ಹೊಂದಿ ಕಾರವಾರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. 26 ರಂದು ಬೆಳಗ್ಗೆ 8.30 ರ ಸುಮಾರಿಗೆ ಕರ್ತವ್ಯದಲ್ಲಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

12 ಜಿಲ್ಲೆ, 3000 ಪಂಚಾಯಿತಿಗಳಲ್ಲಿ ಇಂದಿನಿಂದ ಹೊಸ ಯೋಜನೆ – ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button