Kannada NewsKarnataka NewsPolitics

*ಸಿಎಂ ಸಿದ್ದರಾಮಯ್ಯಗೆ ಕೊಂಚ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದೆ.

ಸಿಎಂ ಸಿದ್ದರಾಮಯ್ಯ ಪರ ಹಿರೀಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಾಂಡಿಸಿದ್ದಾರೆ. ಅರ್ಜಿ ದಾರಪರ ವಕೀಲರು ಹಾಗೂ ದೂರುದಾರರ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಆಗಸ್ 29ರ ಮಧ್ಯಾಹ್ನ 2:30ಕ್ಕೆ ವಿಚಾರಣೆ ಮುಂದೂಡಿದೆ.

ಅಲ್ಲದೇ ಇದೇ ವೇಳೆ ನಾಳೆ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ನಡೆಯಬೇಕಿದ್ದ ಅರ್ಜಿ ವಿಚಾರಣೆ ಹಾಗೂ ಆದೇಶಕ್ಕೂ ಬ್ರೇಕ್ ಹಾಕಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.

Home add -Advt

Related Articles

Back to top button