Belagavi NewsBelgaum NewsKannada NewsKarnataka News

*ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ ಯುವಕ*

ಪ್ರಗತಿವಾಹಿನಿ ಸುದ್ದಿ:: ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಯುವಕನೊಬ್ಬ ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ಅಥಣಿಯಲ್ಲಿ ನಡೆದಿದೆ.

ಭಾನುವಾರ ಬೆಳಿಗ್ಗೆ ದರೂರ ಸೇತುವೆ ಮೇಲಿಂದ ಜಿಗಿದು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಸಂದರ್ಭದಲ್ಲಿ ಶೇಗುಣಸಿ ಗ್ರಾಮದ ಯುವಕ ಪ್ರಶಾಂತ ಗಸ್ತಿ ಎಂಬಾತ ನದಿಗೆ ಹಾರಿ ಹಗ್ಗದ ಸಹಾಯದಿಂದ ಮಹಿಳೆಯನ್ನು ರಕ್ಷಣೆ ಮಾಡಿದ್ದಾನೆ.

ಮಹಿಳೆ ಅಥಣಿ ತಾಲೂಕಿನ ತೀರ್ಥ ಗ್ರಾಮದವರು ಎಂದು ತಿಳಿದುಬಂದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button