
ಪ್ರಗತಿವಾಹಿನಿ ಸುದ್ದಿ: ಈಜಲು ಕೊಳ್ಳಕ್ಕೆ ಇಳಿದಿದ್ದ ಹುಬ್ಬಳ್ಳಿ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ಸವದತ್ತಿ ಪಟ್ಟಣದ ಹೊರವಲಯದಲ್ಲಿರುವ ಸಿದ್ಧನಕೊಳ್ಳದಲ್ಲಿ ನಡೆದಿದೆ.
ಹುಬ್ಬಳ್ಳಿ ಶಿವಶಂಕರ ಕಾಲೋನಿಯ ಸಮರ್ಥ ಗಣೇಶ ಸಾವದಿಗಿ (14) ಮೃತ ಯುವಕ. ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಮೃತದೇಹ ಹೊರ ತೆಗೆಯಲಾಗಿದೆ. ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.