Kannada NewsKarnataka NewsNational

*ಹುಚ್ಚು ಸಾಹಸ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ*

ಪ್ರಗತಿವಾಹಿನಿ ಸುದ್ದಿ: ಹುಚ್ಚು ಸಾಹಸ ಮಾಡಲು ಹೋಗಿ ಪ್ರಾಣವನ್ನು ಕಳೆದುಕೊಳ್ಳುವ ಎಷ್ಟೋ ಘಟನೆಗಳು ಪ್ರತಿದಿನ ವರದಿಯಾಗುತ್ತವೆ. ಇಂಥದ್ದೇ ಒಂದು ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬನ್ಸವಾಡ ಮಂಡಲದ ದೇಸಾಯಿಪೇಟ್ ಗ್ರಾಮದ ಹಾವಾಡಿಗನೊಬ್ಬನ ಮಗ ಶಿವ ಎಂಬಾತ ಗ್ರಾಮದ ಕಾಲೋನಿಗೆ ಪ್ರವೇಶಿಸಿದ 6 ಅಡಿಯ ನಾಗರ ಹಾವನ್ನು ಹಿಡಿದು ಗ್ರಾಮದಿಂದ ಹೊರಗೆ ಬಿಡಲು ತೆಗೆದುಕೊಂಡು ಹೋಗುವ ವೇಳೆ ಹುಚ್ಚು ಸಾಹಸವನ್ನು ಮಾಡಿದ್ದಾನೆ.

Home add -Advt

ಹಾವನ್ನು ಹಿಡಿದುಕೊಂಡು ಅದನ್ನು ಬಾಯಿಯಲ್ಲಿ ಕಚ್ಚಿ ಹಿಡಿದಿದ್ದಾನೆ. ಇದನ್ನು ಅಲ್ಲಿದ್ದವರು ಅಚ್ಚರಿಗೊಂಡು ವಿಡಿಯೋ ಹಾಗೂ ಫೋಟೋ ತೆಗೆದಿದ್ದಾರೆ. ಆದರೆ ಬಾಯಿಯೊಳಗೆ ಹೋದ ಹಾವು ಶಿವನಿಗೆ ಕಚ್ಚಿದ್ದು, ಇದು ಶಿವನ ಗಮನಕ್ಕೆ ಬಂದಿರುವುದಿಲ್ಲ.

Related Articles

Back to top button