Karnataka News

ಐಎಎಸ್ ಅಧಿಕಾರಿ ಜೊತೆ ಮದುವೆ ಮಾಡಿಸು: ದೇವರಿಗೆ ಪತ್ರ ಬರೆದ ಯುವತಿ

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಬನಶಂಕರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯದ ವೇಳೆ ಯುವತಿಯೊಬ್ಬಳು ದೇವರಿಗೆ ಬರೆದಿರುವ ಪತ್ರವೊಂದು ಈಗ ವೈರಲ್ ಆಗಿದೆ. 

ವಿಚಿತ್ರ ಅಂದ್ರೆ ಈ ಹಿಂದೆ ತಾನು ಪ್ರೀತಿಸುತ್ತಿದ್ದ ಹುಡುಗ ಬೇಕು ಅಂತ ದೇವರಿಗೆ ಪತ್ರ ಬರೆದಿದ್ದ ಹುಡುಗಿ ಈಗ ತನಗೆ ಆ ಹುಡುಗ ಬೇಡ ಐಎಎಸ್ ಹುಡುಗ ಬೇಕು ಎಂದು ಪತ್ರ ಬರೆದಿದ್ದಾಳೆ.

Home add -Advt

ಹಾಗಾದ್ರೆ ಪತ್ರದಲ್ಲಿ ಇರೋದು ಏನು? 

“ಅಮ್ಮ ನಾನು ತಪ್ಪು ಮಾಡಿದೀನಿ ಕ್ಷಮಿಸಿ, ಹಿಂದೆ ಪತ್ರ ಬರೆದಾಗ ನಾನು ಗೋಪಿನಾಥ್ ಬಿಟ್ರೆ  ಬೇರೆ ಯಾರನ್ನೂ ಮದುವೆಯಾಗದಂತೆ ಬಯಸಿದ್ದೆ. ಈಗ ಅವನು ನನಗೆ ಬೇಡ. ಆದಷ್ಟು ಬೇಗ ಮುಂದಿನ ವರ್ಷದಷ್ಟರಲ್ಲಿ ನನ್ನ ಮದುವೆ ಆಗುವಂತೆ ಮಾಡು. ಒಳ್ಳೆಯ ಹೆಸರು, ಕೀರ್ತಿ, ಹೃದಯವಂತ, ಗುಣವಂತ, ಸಿರಿವಂತ, ಐಶ್ವರ್ಯವಂತ ಹುಡುಗ ಆಗಿರಬೇಕು, ಯಾವ ಹೀರೋಗೂ ಕಡಿಮೆ ಇರಬಾರದು.

ಅಷ್ಟು ಚೆನ್ನಾಗಿರೋ ಒಳ್ಳೆಯ ಐಎಎಸ್ ಅಧಿಕಾರಿ ಜೊತೆ ನನ್ನ ಮದುವೆ ಮಾಡಿಸು. ನನ್ನ ಗಂಡ ಬೇರೆ ಯಾವ ಹೆಂಗಸರನ್ನು, ಹುಡುಗಿಯರನ್ನು ಕೆಟ್ಟ ದೃಷ್ಟಿಯಿಂದ ನೋಡಬಾರದು, ನನ್ನನ್ನ ಹೆಚ್ಚಾಗಿ ಪ್ರೀತಿ ಮಾಡಬೇಕು. ನಾನಂದ್ರೆ ಅವರಿಗೆ ಜೀವ ಆಗಿರಬೇಕು. ನನಗೆ ಮಕ್ಕಳು, ಮೊಮ್ಮಕ್ಕಳ ಜೊತೆ ಜೀವನ ಮಾಡಬೇಕು ಇಷ್ಟು ವರ್ಷ ಕಾದಿದ್ದಕ್ಕೆ ಒಳ್ಳೆ ಹುಡುಗ ಸಿಕ್ಕಿದ ಅಂತ ಆಡಿಕೊಳ್ಳೋರ ಬಾಯಿ ಮುಚ್ಚಿಸಬೇಕು ಅಂತಹ ಹುಡುಗ ಕೊಡು ಎಂದು ಪತ್ರ ಬರೆದಿದ್ದಾಳೆ.

Related Articles

Back to top button