![LaxmiTai 5](https://pragativahini.com/wp-content/uploads/2024/06/Laxmi-Tai-add-5.jpg)
![GIT add 2024-1](https://pragativahini.com/wp-content/uploads/2024/04/GIT-add-2024-1.jpg)
ಪ್ರಗತಿವಾಹಿನಿ ಸುದ್ದಿ: ಸೆಲ್ಫಿಗಾಗಿ ಪೋಸ್ ನೀದಲು ಹೋಗಿ ಅಬ್ಬಿ ಜಲಪಾತದಲ್ಲಿ ಬಿದ್ದು, ಯುವಕ ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಬಳಿ ನಡೆದಿದೆ.
![Emergency Service](https://pragativahini.com/wp-content/uploads/2023/06/IMG-20221115-WA0034.jpg)
ಬೆಂಗಳೂರು ಮೂಲದ ಪ್ರವಾಸಿಗ 26 ವರ್ಷದ ವಿನೋದ್ ನೀರುಪಾಲಾಗಿರುವ ಯುವಕ. ಅಬ್ಬಿ ಜಲಪಾತ ನೋಡಲೆಂದು 12 ಜನ ಯುವಕರು ತೆರಳಿದ್ದರು. ಈ ವೇಳೆ ಸೆಲ್ಫಿ ಕ್ಲಿಕ್ಕಿಸುವಾಗ ಅಚಾನಕ್ ಆಗಿ ಕಾಲು ಜಾರಿ ಯುವಕ ವಿನೋದ್ ಜಲಪಾತಕ್ಕೆ ಬಿದ್ದು ಮೃತಪಟ್ಟಿದ್ದಾನೆ.
ಸೆಲ್ಫಿ ಕ್ರೇಜಿಗೆ ಯುವಕನೊಬ್ಬ ಬಲಿಯಾಗಿದ್ದು, ಸ್ಥಳಕ್ಕೆ ಪೊಲಿಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.