Kannada NewsKarnataka NewsPolitics

*KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಬ್ದುಲ್ ಜಬ್ಬಾರ್‌*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಬೈಎಲೆಕ್ಷನ್ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್​ ಹೈಕಮಾಂಡ್​ ದೊಡ್ಡ ಶಾಕ್​ ನೀಡಿದೆ. ದಾವಣಗೆರೆ ಬೈಎಲೆಕ್ಷನ್ ಪ್ರಚಾರದಿಂದ ದೂರ ಉಳಿದಿರುವುದು, ಷಡ್ಯಂತ್ರದ ಆರೋಪ ಎದುರಿಸಿತ್ತಿದ್ದ KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್‌ ರಾಜೀನಾಮೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿದ್ದು, ದಾವಣಗೆರೆ ಉಪಚುನಾವಣೆಯ ಮತದಾನ ಮುಗಿದಿದ್ದರೂ ಪಕ್ಷದಲ್ಲಿನ ಗೊಂದಲ ಇನ್ನೂ ಬಗೆಹರಿದಿಲ್ಲ. ಈ ಮುನಿಸು ಮತ್ತಷ್ಟು ತೀವ್ರಗೊಂಡಿರುವ ನಡುವೆಯೇ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ದಿಢೀ‌ರ್ ರಾಜೀನಾಮೆ ಸಲ್ಲಿಸಿರುವುದರಿಂದ ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ನೀಡಿದೆ.

Home add -Advt

ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರದಿಂದ ಸಚಿವ ಜಮೀ‌ರ್ ಮತ್ತು ಅಬ್ದುಲ್ ಜಬ್ಬಾರ್ ದೂರ ಉಳಿದಿದ್ದರು. ಪ್ರಚಾರದಿಂದ ದೂರ ಉಳಿದ ನಾಯಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪಕ್ಷದ ಒಂದು ಬಣ ಪಟ್ಟು ಹಿಡಿದಿತ್ತು. ಈ ಒತ್ತಡದ ಪರಿಣಾಮವಾಗಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button