ಸಿಎಂ ಜಗನ್ ನಿರ್ಧಾರ ಖಂಡನೀಯ ಎಂದ ಪವನ್ ಕಲ್ಯಾಣ್

ಪ್ರಗತಿವಾಹಿನಿ ಸುದ್ದಿ; ಅಮರಾವತಿ: ಆಂಧ್ರ ವಿಧಾನ ಪರಿಷತ್‌ ರದ್ದುಗೊಳಿಸುವ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ವೈ.ಎಸ್​​ ಜಗನ್​​ ಮೋಹನ್​​ ರೆಡ್ಡಿ ನೇತೃತ್ವದ ಸರ್ಕಾರದ ವಿರುದ್ಧ ಜನಸೇನಾ ಮುಖ್ಯಸ್ಥ ನಟ ಪವನ್​​ ಕಲ್ಯಾಣ್​​ ಕಿಡಿಕಾರಿದ್ಧಾರೆ.

ಸುದ್ದಿಗಾರರೊಂದಿಗೆ ಮಾತಾಡಿದ ನಟ ಪವನ್​​ ಕಲ್ಯಾಣ್​​, ಜಗನ್​​ ಮೋಹನ್​​ ರೆಡ್ಡಿ ಸರ್ಕಾರ ತೀರ್ಮಾನ ನ್ಯಾಯಸಮ್ಮತ ಅಲ್ಲ. ಇದು ಸಂವಿಧಾನಕ್ಕೆ ವಿರುದ್ಧವಾದ ನಿರ್ಧಾರ ಎಂಬುದು ಜನಸೇನೆ ಅಭಿಪ್ರಾಯ ಎಂದರು.

ವೈ.ಎಸ್​​ ರಾಜಶೇಖರ್​​ ರೆಡ್ಡಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್​​​ ಶುರು ಮಾಡಲಾಯ್ತು. ಅಂದಿನ ವಿಧಾನ ಪರಿಷತ್​​ ಅನ್ನು ಇಂದು ಸಿಎಂ ವೈ.ಎಸ್ ಜಗನ್​​ ಮೋಹನ್​ ರೆಡ್ಡಿ ರದ್ದುಗೊಳಿಸಿರುವುದು ಖಂಡನೀಯ. ಇದರ ವಿರುದ್ಧ ಜನಸೇನೆ ಹೋರಾಟ ಮಾಡಲಿದೆ. ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಲುವಾಗಿ ವಿಧಾನ ಪರಿಷತ್​​ ಬೇಕಿದೆ ಎಂದು​ ತಿಳಿಸಿದರು.

ವಿಧಾನ ಪರಿಷತ್​​ ತೆಗೆದು ಹಾಕಲು ಆಂಧ್ರಪ್ರದೇಶ ಸಿಎಂ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ಸಚಿವ ಸಂಪುಟ ನಿರ್ಣಯ ತೆಗೆದುಕೊಂಡಿದೆ. ಇದನ್ನು ಈಗಾಗಲೇ ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ಆಡಳಿತರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ಇರುವುದರಿಂದ ಸುಲಭವಾಗಿ ಅನುಮೋದನೆ ಸಿಕ್ಕಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button