Latest

ಲಂಚ ಸ್ವೀಕರಿಸುವಾಗಲೇ ACB ದಾಳಿ; PSI ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಪೊಲೀಸ್ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಬರೋಬ್ಬರಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಇಂದು ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ ಪಿಎಸ್ ಐ ಬೇಬಿ ಓಲೇಕರ್ ಸಿಕ್ಕಿ ಬಿದ್ದಿದ್ದಾರೆ.

ಗಿರೀಶ್ ಎಂಬುವವರ ಬಳಿ ಪಿಎಸ್ ಐ ಬೇಬಿ 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಹೊರಮಾವು ಸಮೀಪದ ಜಮೀನು ಕೇಸ್ ಬಗ್ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗಿರೀಶ್ ಎಂಬುವವರಿಂದ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ತಕ್ಷಣ ಪಿಎಸ್ ಐ ಬೇಬಿ ಓಲೆಕರ್ ಅವರನ್ನು ಬಂದ್ಧಿಸಿದ್ದಾರೆ.
ಭ್ರಷ್ಟರನ್ನು ಮಟ್ಟ ಹಾಕಿಯೇ ಅಧಿಕಾರದಿಂದ ವಿಶ್ರಾಂತಿ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಜ್ಞೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button