
ಪ್ರಗತಿವಾಹಿನಿ ಸುದ್ದಿ, ವಿಜಯಪುರ: ಇಲ್ಲಿನ ಕೊಲ್ಹಾರ ಕುಪಕಡ್ಡಿ ಬಳಿ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಣೇಶ ಹಬ್ಬದ ದಿನವಾದ ಬುಧವಾರ ಸಂಜೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಕಲಬುರ್ಗಿ ಜಿಲ್ಲೆಯ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ(25), ಅವರ 3 ತಿಂಗಳ ಮಗಳು ಸುಮನ ಹಾಗೂ ಶರಣಮ್ಮ ಬಸವರಾಜ ಕಲಶೆಟ್ಟಿ (55) ಮೃತಪಟ್ಟವರು.
ಇಬ್ಬರು ಸ್ಥಳದಲ್ಲಿ ಅಸು ನೀಗಿದ್ದರೆ ಶರಣಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
ಗಂಭೀರವಾಗಿ ಗಾಯಗೊಂಡಿರುವ ಅದೇ ಕುಟುಂಬದ ಉಮೇಶ ಕಲಶೆಟ್ಟಿ ಹಾಗೂ ಸುರೇಖಾ ಕಲಶೆಟ್ಟಿ ಅವರನ್ನು ವಿಜಯಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಲ್ಹಾರ ಪೊಲೀಸ್ ಠಾಣೆ ಪಿಎಸ್ ಐ ಪ್ರೀತಮ್ ನಾಯಕ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರಿದಿದೆ.
ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಮಳೆಹಾನಿ ಪರಿಶೀಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ