Kannada NewsKarnataka NewsLatest

*ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ: ಟ್ಯಾಂಕರ್, ಕಾರು ಹಾಗೂ ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅವರಾದ ಗ್ರಾಮದಲ್ಲಿ ನಡೆದಿದೆ.

Home add -Advt

ಬೈಕ್ ನಲ್ಲಿ ತೆರಳುತ್ತಿದ್ದ ಸಿರಡೋಣ ಗ್ರಾಮದ ನಾಗೇಂದ್ರ, ಶಿವಾನಂದ ಅಪ್ಪಾರಾವ, ಕಾರಿನಲ್ಲಿದ್ದ ದತ್ತಾತ್ರೇಯ ಚಿಮಾಜಿ, ಚಂದ್ರಕಲಾ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button