Kannada NewsKarnataka NewsLatest
*ಭೀಕರ ಅಪಘಾತ: ಶಾಸಕ ಮಹೇಶ್ ಟೆಂಗಿನಕಾಯಿ ಕಾರು ಚಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಕಾರು ಚಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಮಂಜುನಾಥ್ ಹೂಗಾರ್ (45) ಮೃತ ಕಾರು ಚಾಲಕ. ಹುಬ್ಬಳ್ಳಿ ತಾಲೂಕಿನ ನೂಲ್ವಿ ಮೂಲದವರು. ಮಂಜುನಾಥ್ ನಿನ್ನೆ ರಾತ್ರಿ ಬೈಕ್ ನಲ್ಲಿ ತಮ್ಮ ಸ್ವಗ್ರಾಮ ನೂಲ್ವಿಗೆ ಹೋಗುತ್ತಿದರು. ಈ ವೇಳೆ ಬೈಕ್ ಸ್ಕಿಡ್ ಆಗಿ ದುರಂತ ಸಂಭವಿಸಿದೆ. ಮಂಜುನಾಥ್ ಹೂಗಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೆದ್ದಾರಿಯಿಂದ ನೂಲ್ವಿಯತ್ತ ಹೋಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾರು ಚಾಲಕ ಮಂಜುನಾಥ್ ಅಗಲಿಕೆಗೆ ಶಾಸಕ ಮಹೇಶ್ ಟೆಂಗಿನಕಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ. ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



