Kannada NewsLatestNational

*ಭೀಕರ ಅಪಘಾತ: ಆರು ಜನ ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ: ಟ್ರಕ್ ಹಾಗೂ ಕಾರಿನ ಮದ್ಯೆ ಭೀಕರ ಅಪಘಾತ ಸಂಭವಿಸಿ, ಆರು ಜನ ಸಜೀವ ದಹನಗೊಂಡಿರುವ ಘಟನೆ ನಡೆದಿದೆ.‌

ಚಲಿಸುತ್ತಿದ್ದ ಟ್ರಕ್‌ಗೆ ಹಿಂದಿನಿಂದ ಕಾರು ಗುದ್ದಿದ್ದು, ಅಪಘಾತವಾಗುತ್ತಿದ್ದಂತೆ ಲಾರಿ ಹಾಗೂ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಕಾರಿನಲ್ಲಿ ಸಿಲುಕಿದ್ದವರು ಸಜೀವ ದಹನಗೊಂಡಿದ್ದಾರೆ. ಈ ಘಟನೆಯು ರಾಜಸ್ಥಾನದ ಸಿಕರ್‌ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಮೃತರೆಲ್ಲರೂ ದೇವಸ್ಥಾನದಿಂದ ಮನೆಗೆ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ. ಹಾಗೂ ಮೃತರು ಉತ್ತರ ಪ್ರದೇಶದ ನಿವಾಸಿಗಳೆಂದು ತಿಳಿದು ಬಂದಿದ್ದು ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

Related Articles

Back to top button