Karnataka News

*ದೇವಸ್ಥಾನದಿಂದ ಮರಳುವಾಗ ಅಪಘಾತ: ನಾಲ್ವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿ ಒಟ್ಟು 4 ಮಂದಿ ಸಾವನಪ್ಪಿರುವ ದುರ್ಘಟನ ಕಲಬುರಗಿ ಜಿಲ್ಲೆಯ ಕಮಲಾಪುರದ ಬಳಿ ನಡೆದಿದೆ.

ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಭೀಕರ ಅಪಘಾತದಲ್ಲಿ ಒಂದೆ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.‌ ಗೂಡ್ಸ್ ವಾಹನ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. 

Home add -Advt

ಭಾರ್ಗವ ಕೃಷ್ಣ(55), ಸಂಗೀತ (45), ಪುತ್ರ ರಾಘವ್, ಕಾರು ಚಾಲಕ ಸೇರಿ ಎಲ್ಲರೂ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಕಮಲಾಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತರೆಲ್ಲರೂ ಗಾಣಗಾಪುರ ದತ್ತಾತ್ರೇಯ ದೇಗುಲಕ್ಕೆ ಭೇಟಿ ನೀಡಿ ವಾಪಸ್ ಆಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಗೂಡ್ಸ್ ವಾಹನ ರಭಸದಿಂದ ಕಾರಿಗೆ ಡಿಕ್ಕಿಹೊಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಎಲ್ಲರೂ ಪ್ರಾಣಬಿಟ್ಟಿದ್ದಾರೆ.

Related Articles

Back to top button