National

*ಮಹಾಕುಂಭ ಮೇಳಕ್ಕೆ ತೆರಳುತ್ತಿದ ವೇಳೆ ಭೀಕರ ಅಪಘಾತ: 10 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ 10 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಿರ್ಜಾಪುರ-ಪ್ರಯಾಗ್ ರಾಜ್ ಹೆದ್ದಾರಿಯಲ್ಲಿ ನಡೆದಿದೆ.

ಬೊಲೆರೋ ವಾಹನ ಹಾಗೂ ಬಸ್ ನಡುವೆ ಭೀಕರಪ ಅಪಘಾತ ಸಂಭವಿಸಿದ್ದು, ಬೊಲೆರೋದಲ್ಲಿದ್ದ 10 ಜನರು ಮೃತಪಟ್ಟಿದ್ದಾರೆ. ಮೃತರು ಛತ್ತೀಸ್ ಗಢದ ಕೋರ್ಬಾ ಜಿಲ್ಲೆಯವರು ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ಪವಿತ್ರ ಸ್ನಾನಕ್ಕೆಂದು ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿ ಮೃತಪಟ್ಟಿದ್ದಾರೆ.

Home add -Advt

Related Articles

Back to top button