*ಭೀಕರ ಅಪಘಾತ; ಕ್ರೂಸರ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ ಹಿಡೆದ ಪ್ರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಟ್ನಿಹಳ್ಳಿ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದಿದೆ. ಅಪಘಾತದಲ್ಲಿ ಕ್ರೂಸರ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.Home add -Advt ಪ್ರದೀಪ್ (25) ವಿನೋದ್ (26), ವರ್ದೀಶ್ (25) ಮೃತರು. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೀದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.