Belagavi NewsBelgaum NewsKannada NewsKarnataka NewsLatest
*ಭೀಕರ ಅಪಘಾತ: ಅಥಣಿ ಮೂಲದ ಒಂದೇ ಕುಟುಂಬದ ನಾಲ್ವರು ಸೇರಿ ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತಿರುಪತಿಗೆ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿ ಮೂಲದ ಐವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಿದ್ದು, ಮೃತರೆಲ್ಲರು ಅಥಣಿ ಮೂಲದವರಾಗಿದ್ದು, ಅವರಲ್ಲಿ ನಾಲ್ವರು ಒಂದೇ ಕುಟುಂಬ ಸದಸ್ಯರು ಎಂದು ತಿಳಿದುಬಂದಿದೆ.
ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಚಿತ್ತೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಗಾಯಾಳುಗಳಲ್ಲಿ 7 ಜನರ ಸ್ಥಿತಿ ಗಂಭೀರವಾಗಿದೆ.
ಆಂಧ್ರಪ್ರದೇಶದ ಕೆವಿಪಲ್ಲಿ ತಾಲೂಕಿನ ಮಠಂಪಲ್ಲಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಹನುಮಂತ ಆಜೂರ (52), ಮಾನಂದಾ ಆಜೂರ (46), ಶೋಭಾ ಆಜೂರ (36) ಅಬೀಕಾ ಆಜೂರ (19) ಮಣಮಂತ ಜಾಧವ್ (52) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಅಥಣಿ ತಾಲೂಕಿನ ಬಡಚಿ ಗ್ರಮದವರಾಗಿದ್ದಾರೆ.
ಗಾಯಾಳುಗಳನ್ನು ರೂವಾ ಆಸ್ಪತ್ರೆಗೆ ದಾಖಲಿಸಲಾಗಿದೆ.