Belagavi NewsBelgaum NewsKannada NewsKarnataka NewsLatest

*ಭೀಕರ ಅಪಘಾತದಲ್ಲಿ ASI ದುರ್ಮರಣ; PSI ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯ ಎಎಸ್ಐ ಮೃತಪಟ್ಟಿದ್ದು, ಇದೇ ಪ್ರಕರಣದಲ್ಲಿ ಈಗ ಪಿಎಸ್ಐ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಕರ್ತವ್ಯದಲ್ಲಿದ್ದ ಎ ಎಸ್ ಐ ವಿಜಯಕಾಂತ ಮಿಕಲಿ (51) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದರು. ಬೆಳಗಾವಿ ಎಸ್ ಪಿ ಡಾ.ಭೀಮಾಶಂಕರ್ ಗುಳೇದ್ ಎಲ್ಲಾ ಪೊಲೀಸರು ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಿ ಆದೇಶಿಸಿದ್ದರೂ ವಿಜಯಕಾಂತ ಮಿಕಲಿ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದರು. ಇದೇ ವೇಳೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಪೊಲೀಸರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಆದೇಶ ನೀಡಿದ್ದರೂ ಎಎಸ್ಐ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಮೇಲಧಿಕಾರಿಗಳ ನಿರ್ದೇಶನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೇ ನಿರ್ಲಕ್ಷ್ಯವಹಿಸಿದ ಕಾರಣಕ್ಕೆ ದೊಡವಾಡ ಠಾಣೆ ಪಿಎಸ್ ಐ ನಂದೀಶ್ ಅವರನ್ನು ಅಮಾನತು ಮಾಡಿ ಎಸ್ ಪಿ ಆದೇಶ ಹೊರಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button