*ಭೀಕರ ಅಪಘಾತ: ತಾಯಿ ಹಾಗೂ ಮಗ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಂಟೇನರ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಕೆಂಪುಹೊಳೆ ಬಳಿ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ನಾಲ್ವರು ಗಾಯಗೊಂಡಿದ್ದಾರೆ. ಬಂಟ್ವಾಳ ಮೂಲದ ತಾಯಿ ಸಫಿಯಾ (58) ಹಾಗೂ ಮಗ ಶಫಿಕ್ (20) ಮೃತ ದುರ್ದೈವಿಗಳು ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಭಾರಿ ಮಳೆ: … Continue reading *ಭೀಕರ ಅಪಘಾತ: ತಾಯಿ ಹಾಗೂ ಮಗ ಸ್ಥಳದಲ್ಲೇ ದುರ್ಮರಣ*