Karnataka News
*ಭೀಕರ ಅಪಘಾತ: ಬೈಕ್ ನಲ್ಲಿದ್ದ ಯೋಧ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಲಾರಿ, ಬೈಕ್, ಆಂಬುಲೆನ್ಸ್ ನಡುವೆ ನಡೆದಿದ್ದ ಭೀಕರ ಸರಣಿ ಅಪಘಾತದಲ್ಲಿ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಬಿಎಸ್ ಎಫ್ ಯೋಧ ಮೌನೇಶ್ ರಾಥೋಡ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂಬುಲೆನ್ಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುವನ್ನು ಕೇರಳ ಮೂಲದ ರಿತೇಶ್ ಎಂದು ಗುರುತಿಸಲಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.




