Latest

ಮನೆ ಮಂದಿ ಮುಂದೇ ಬಾಲಕಿ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರು ಅಂದರ್

ಪ್ರಗತಿವಾಹಿನಿ ಸುದ್ದಿ, ಬೆಳ್ತಂಗಡಿ: ರಾತ್ರಿ ಮನೆಗೆ ನುಗ್ಗಿ ಮನೆಯ ಜನರೆದುರೇ ಬಾಲಕಿ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರನ್ನು ಜನರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಯಿಲ ಗ್ರಾಮದ ಹಸೈನಾರ್(24) ಮತ್ತು ಅಬ್ಬಾಸ್(30) ಬಂಧಿತರು.

Home add -Advt

ನೀರು ಕೇಳುವ ನೆಪದಲ್ಲಿ ಬಾಲಕಿ ಮನೆಗೆ ಹೋಗಿದ್ದ ದುಷ್ಕರ್ಮಿಗಳು ಬಾಲಕಿ ಕೈಗೆ ಚೀಟಿ ಕೊಟ್ಟು ಅದರಲ್ಲಿರುವ ಮೊಬೈಲ್ ನಂಬರ್ ಗೆ ಕಾಲ್ ಮಾಡದಿದ್ದರೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ಹೋಗಿದ್ದರು.

ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಜನರೆಲ್ಲ ಎಚ್ಚರವಾಗಿದ್ದ ಸಂದರ್ಭದಲ್ಲೇ ಬಾಲಕಿ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದಾರೆ. ಈ ವೇಳೆ ಬಾಲಕಿ ತಾಯಿ ಜೋರಾಗಿ ಕೂಗಿಕೊಂಡಿದ್ದರಿಂದ ಅಕ್ಕಪಕ್ಕದವರೆಲ್ಲ ಬಂದು ಬಾಲಕಿಯನ್ನು ರಕ್ಷಿಸಿ ನಂತರ ಸ್ಥಳೀಯರ ಸಹಾಯದಿಂದ ಅಬ್ಬಾಸ್ ಮತ್ತು ಹಸೈನಾರನ ಹೆಡೆಮುರಿ ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

https://pragati.taskdun.com/pu-student-commits-suicide-due-to-exam-fear/
https://pragati.taskdun.com/this-time-the-monsoon-will-advance-before-the-period/
https://pragati.taskdun.com/election-boycott-threat/

Related Articles

Back to top button