
ಪ್ರಗತಿವಾಹಿನಿ ಸುದ್ದಿ; ರಾಮನಗರ: ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಆಸಿಡ್ ದಾಳಿ ನಡೆಸಿರುವ ಅಮಾನುಷ ಘಟನೆ ರಾಮನಗರದಲ್ಲಿ ನಡೆದಿದೆ.
ಕಳೆದ ಒಂದು ವರ್ಷದಿಂದ ಯುವಕ ಹಾಗೂ ಅಪ್ರಾಪ್ತ ಬಾಲಕಿ ಇಬ್ಬರೂ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಇಬ್ಬರ ನಡುವೆ ಜಗಳವಾಗಿತ್ತು ಎನ್ನಲಾಗಿದೆ. ಯುವತಿ ಪ್ರೀಈತಿ ನಿರಾಕರಿಸಿದ್ದಕ್ಕ ಸಿಟ್ಟಿಗೆದ್ದ ಯುವಕ ಆಕೆಯ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ.
ಬಾಲಕಿಯ ಎಡಗಣ್ಣಿಗೆ ಗಾಯವಾಗಿದ್ದು, ಬಾಲಕಿಯನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಯುವಕನನ್ನು ಬಂಧಿಸಿರುವ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿದ್ದಾರೆ.
*ಕಲುಷಿತ ನೀರು ದುರಂತ; ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು ತನಿಖೆಗೆ ಆದೇಶಿಸಿದ ಲೋಕಾಯುಕ್ತ*
https://pragati.taskdun.com/yadagiricontaminated-waterthree-deathslokayukta/