Film & Entertainment

*ನಟ ಚೇತನ್ ಚಂದ್ರ ಮೇಲೆ ಹಲ್ಲೆ; ಓರ್ವ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನಟ ಚೇತನ್ ಚಂದ್ರ ಮೇಲೆ 20 ಜನರು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕಗ್ಗಲಿಪುರ ಸಮೀಪ ನಡೆದಿದೆ.

ನಿನ್ನೆ ಮದರ್ ಡೇ ಪ್ರಯುಕ್ತ ತಾಯಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ವಾಪಸ್ ಬರುವಾಗ ಚೇತನ್ ಚಂದ್ರ ಅವರ ಕಾರು ಅಡ್ಡಗಟ್ಟಿ ರೋಲ್ ಕಾಲ್ ಮಾಡಲು ಕಿಡಿಗೇಡಿಗಳು ಮುಂದಾಗಿದ್ದಾರೆ. ನಟ ಹಣ ಕೊಡೋದಿಲ್ಲ ಎಂದಿದ್ದಕ್ಕೆ ಕಿಡಿಗೆಡಿಗಳು ಗಲಾಟೆ ಮಾಡಿ ನಟ ಚೇತನ್‌ಚಂದ್ರ ಅವರ ಮುಖಕ್ಕೆ ರಕ್ತ ಬರುವ ಹಾಗೆ ಹೊಡೆದಿದ್ದಾರೆ. ಅವರ ಕಾರಿಗೂ ಹಾನಿ ಮಾಡಿದ್ದಾರೆ.‌ 

ಘಟನೆ ಆದ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ನಟ, ಇನ್ನು ಈ ಘಟನೆ ಯಾವ ರೀತಿ ನಡೆಯಿತು ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.‌ ಹಲ್ಲೆಗೆ ಒಳಗಾದ ಬಳಿಕ ಅವರು ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಮೇರೆಗೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt

Related Articles

Back to top button