Latest

ಅದಾನಿ, ರಾಹುಲ್ ವಿಚಾರಕ್ಕೆ ಸಂಸತ್ ಕಲಾಪ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ವಿಷಯ ಅದಾನಿ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಸಂಬಂಧಿಸಿದ ಬೇಡಿಕೆಯ ವಿಚಾರದ ನಡುವೆ ಸೋಮವಾರದ ಸಂಸತ್‌ ಉಭಯ ಸದನಗಳ ಕಲಾಪ ಉಭಯ ಸದನಗಳ ಕಲಾಪ ಆರಂಗೊಂಡ ಕೆಲವೇ ನಿಮಿಷಗಳಲ್ಲಿ ವಿಪಕ್ಷಗಳ ಸಂಸದರ ಪ್ರತಿಭಟನೆಯಿಂದಾಗಿ ಮುಂದೂಡಲ್ಪಟ್ಟಿವೆ.

ರಾಜ್ಯಸಭೆಯನ್ನು ಮಧ್ಯಾಹ್ನ 2 ಗಂಟೆಗೆ ಮತ್ತು ಲೋಕಸಭೆಯನ್ನು ಸಂಜೆ 4 ಗಂಟೆಗೆ ಮುಂದೂಡಲಾಗಿದೆ

ಎರಡೂ ವಿಚಾರಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ತನ್ನ ಪ್ರತಿಭಟನೆ ಮುಂದುವರಿಸಿದೆ. ಲೋಕಸಭೆ, ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್‌ ಸಂಸದರು ಕಪ್ಪು ಬಟ್ಟೆ ಧರಿಸಿ ಸದನದ ಬಾವಿಗಿಳಿದು ಪ್ರತಿಭಟಿಸಲಾರಂಭಿಸಿದರು. ಹೀಗಾಗಿ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪ ಮುಂದೂಡಲಾಯಿತು. 

ಇದೇ ವೇಳೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರ ಮೇಲೆ ಕಾಂಗ್ರೆಸ್ ಸಂಸದರು ಪೇಪರ್‌ ಎಸೆದಿದ್ದು ಇದು ಸ್ಪೀಕರ್ ಗೆ ಮಾಡಿದ ಅವಮಾನ ಎಂದು ಆಡಳಿತಾರೂಢ ಬಿಜೆಪಿ ಸಂಸದರು, ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Home add -Advt

https://pragati.taskdun.com/niapfi-officeseized/
https://pragati.taskdun.com/another-life-threat-came-to-actor-salman-khan-a-youth-arrested/
https://pragati.taskdun.com/attack-on-holi-programme-6-workers-of-bajrang-dal-arrested-released/

Related Articles

Back to top button