Kannada NewsKarnataka NewsLatest

*ಅಘನಾಶಿನಿ ನದಿಗೆ ಅಡ್ದಲಾಗಿ ನಿರ್ಮಿಸುತ್ತಿದ್ದ ನಿರ್ಮಾಣ ಹಂತದ ಸೇತುವೆ ಕುಸಿತ*

ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ

ಪ್ರಗತಿವಾಹಿನಿ ಸುದ್ದಿ: ತಾರಿಬಾಗಿಲು ಹಾಗೂ ಹೆಗಡೆ ಸಂಪರ್ಕಿಸುವ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದಿದ್ದು, ಸೇತುವೆ ಕೆಳಗಿದ್ದ ಟ್ರಕ್ ಸಂಪೂರ್ಣ ಜಖಂ ಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ನಡೆದಿದೆ.

ಅಘನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆ ಇದಾಗಿದ್ದು, ನಿರ್ಮಾಣ ಹಂತದ ಸೇತುವೆ ಸ್ಲ್ಯಾಬ್ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕಳಪೆ ಕಾಮಗಾರಿಯೇ ಸೇತುವೆ ಸ್ಲ್ಯಾಬ್ ಕುಸಿಯಲು ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

Related Articles

Back to top button