*ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೃಷಿಹೊಂಡದಲ್ಲಿ ಮುಳುಗಿ ಒಂದೆ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿಯಲ್ಲಿ ನಡೆದಿದೆ. ಮರಿಯಪ್ಪ (70), ಮುನಿಯಮ್ಮ (68) ಹಾಗೂ ಭಾರತಿ (40) ಮೃತ ದುದೈವಿಗಳು. ಘಟನಾಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹವನ್ನು ಹೊರತೆಗೆದಿದ್ದಾರೆ. ಹೊಸಕೋಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಹೆತ್ತ ತಾಯಿಯಿಂದಲೇ ಮಗುವಿನ ಮೇಲೆ ಮನಬಂದಂತೆ ಹಲ್ಲೆ; ಕೂಡಿ ಹಾಕಿ ಹೊಡೆದು, ಪರಚಿ ಚಿತ್ರಹಿಂಸೆ ನೀಡಿದ ಅಮ್ಮ*